Belagavi NewsBelgaum NewsKannada NewsKarnataka News

ವಿದ್ಯುತ್ ಪ್ರಸರಣ: ಸಾರ್ವಜನಿಕರ ಗಮನಕ್ಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಚಾಲ್ತಿಯಲ್ಲಿರುವ ೧೧೦/೧೧ಕೆವಿ ಢವಳೇಶ್ವರ ವಿದ್ಯುತ್ ಉಪಕೇಂದ್ರದಿಂದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ೧೧೦/೧೧ಕೆವಿ ವಿದ್ಯುತ್ ಕೇಂದ್ರಕ್ಕೆ ಜೋಡಿ ಗೋಪುರಗಳ ಮೇಲೆ ೪.೬೭೧ ಕಿ.ಮಿ ಉದ್ದದ ಒಂಟಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ, ಸದರಿ ೧೧೦ ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಢವಳೇಶ್ವರ, ಅರಳಿಮಟ್ಟಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.
ಸದರಿ ವಿದ್ಯುತ್ ಪ್ರಸರಣ ಮಾರ್ಗವನ್ನು ಮಾ.೨೭ ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್‌ನ್ನು ಹರಿಬಿಡಲಾಗುವದು. ಆದರಿಂದ ಸಾರ್ವಜನಿಕರು ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ, ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಾಯಕವಾಗುವುದು. ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಬೃಹತ್ ಕಾಮಗಾರಿ ವಿಭಾಗ, ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button