Belagavi NewsBelgaum NewsKarnataka News

*ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿನ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಸಕ್ಕರೆ ಕಾರ್ಖಾನೆಯಲ್ಲಿನ ಬಾಯ್ಲರ್ ನಲ್ಲಿ ಬೆಂಕಿ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಫ್ಯಾಕ್ಟರಿ ಬೆಂಕಿಯಲ್ಲಿ ಧಗ ಧಗನೆ ಹೊತ್ತಿ ಉರಿದಿದೆ. 24 ಟನ್ ಬಾಯ್ಲರ್ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

Home add -Advt

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

Related Articles

Back to top button