Kannada NewsKarnataka NewsLatest
ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ಬಿಮ್ಸ್ ಆಡಳಿತಾಧಿಕಾರಿ – ಸಿಎಂ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿಯನ್ನಾಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಕೊರೋನಾ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಆದಿತ್ಯ ಬಿಸ್ವಾಸ್ ತಕ್ಷಣ ಅಧಿಕಾರ ವಹಿಸಿಕೊಳ್ಳಲಿದ್ದು, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಸಿಎಂ ತಿಳಿಸಿದರು.
ಬಿಮ್ಸ್ ನಲ್ಲಿ ಕೊರೋನಾ ಚಿಕಿತ್ಸೆಯ ಅವ್ಯವಸ್ಥೆ ಕುರಿತು ಭಾರಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಆಗಮಿಸಿದ್ದರು.
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ; ಬಿಮ್ಸ್ ಗೆ ಐಎಎಸ್ ಆಡಳಿತಾಧಿಕಾರಿ
ಬಿಮ್ಸ್ ಗೆ ಚಿಕಿತ್ಸೆ ನೀಡಲು ಇಂದು ಬೆಳಗಾವಿಗೆ ಯಡಿಯೂರಪ್ಪ




