Uncategorized

*ಸರ್ವರ್ ಹ್ಯಾಕ್ ಅಲ್ಲ, ರಾಜ್ಯ ಸರ್ಕಾರದ ಬುದ್ಧಿನೇ ಹ್ಯಾಕ್ ಆಗಿದೆ ಎಂದ ಪ್ರಹ್ಲಾದ್ ಜೋಶಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕೇಂದ್ರ ಸರ್ಕಾರದ ಬಳಿ ಅಕ್ಕಿ ಸ್ಟಾಕ್ ಇದ್ದರೂ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ ಅಕ್ಕಿ ಸ್ಟಾಕ್ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರು ಎಲ್ಲಾ ವಿಷಯಗಳಲ್ಲೂ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದೇ ಕಾಂಗ್ರೆಸ್ ಗೆ ರಕ್ತಗತವಾಗಿ ಬಂದಿದೆ. ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಎಂದಿದ್ದಾರೆ, ಸರ್ವರ್ ಹ್ಯಾಕ್ ಅಲ್ಲ, ರಾಜ್ಯ ಸರ್ಕಾರದ ಬುದ್ಧಿಯೇ ಹ್ಯಾಕ್ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಮೊದಲು 10 ಕೆಜಿ ಉಚಿತ ಅಕ್ಕಿ ಕೊಡುವುದಾಗಿ ಹೇಳಿದರು. ಈಗ ಮಾತಿಗೆ ತಪ್ಪುತ್ತಿದ್ದಾರೆ. ಉಚಿತ ವಿದ್ಯುತ್ ಎಂದು ಕರಂಟ್ ಬಿಲ್ ಹೆಚ್ಚಿದ್ದಾರೆ. ಮೊದಲು ವಿದ್ಯುತ್ ದರ ಹೆಚ್ಚಳ ಹಿಂಪಡೆಯಲಿ ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಈಗಾಗಲೆ ಜನರು ಭ್ರಮನಿರಸನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button