ಪ್ರಗತಿವಾಹಿನಿ ಸುದ್ದಿ, ಮಂಡ್ಯ
ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ್ದು, ಅಭಿಮಾನಗಳೊಂದಿಗೆ ರ್ಯಾಲಿ ಆರಂಭಿಸಿದ್ದಾರೆ.
ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸುಮಲತಾ ನಂತರ ಮಂಡ್ಯಕ್ಕೆ ತೆರಳಿ ತಮ್ಮ ನಾಮಪಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಗಳು ಸೇರಿದ್ದು, ಎಲ್ಲಿ ನೋಡಿದರೂ ಸುಮಲತಾ ಪರ ಘೋಷಣೆಗಳು ಮೊಳಗುತ್ತಿವೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಇದೇ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವುದರಿಂದ ಈ ಕ್ಷೇತ್ರ ಈಗ ಎಲ್ಲರ ಗಮನ ಸೆಳೆದಿದೆ.
ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡುವುದೋ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೋ ಎನ್ನುವುದು ಇನ್ನೂ ಖಚಿತವಾಗಿಲ್ಲ.