*ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ಬಂಧಿಸಿ, ಸಿಬಿಐ ತನಿಖೆಗೆ ವಹಿಸಿ; ಪ್ರಹ್ಲಾದ್ ಜೋಶಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಸಂಬಂಧ ಸಚಿವ ನಾಗೇಂದ್ರರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ಇದೊಂದು ಬಹುದೊಡ್ಡ ಭ್ರಷ್ಟಾಚಾರ ಹಗರಣವಾಗಿದ್ದು, ಇದರ ತನಿಖೆ ಸಿಬಿಐಗೇ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಸಚಿವ ನಾಗೇಂದ್ರರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಮತ್ತು ಇದರಲ್ಲಿ ಸಿಎಂ ಸೇರಿದಂತೆ ಸಂಬಂಧಿಸಿದ ಎಲ್ಲರ ಮೇಲೂ ತನಿಖೆ ಆಗಬೇಕು ಎಂದು ಜೋಶಿ ಆಗ್ರಹಿಸಿದರು. ನಿರ್ಲಜ್ಜೆಯ … Continue reading *ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ಬಂಧಿಸಿ, ಸಿಬಿಐ ತನಿಖೆಗೆ ವಹಿಸಿ; ಪ್ರಹ್ಲಾದ್ ಜೋಶಿ ಆಗ್ರಹ*