Latest

*ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಕರೆದೊಯ್ದು ಹಾಸನದಲ್ಲಿ ಸ್ಥಳ ಮಹಜರು ನಡೆಸಿದ SIT*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ ಐಟಿ ಅಧಿಕಾರಿಗಳು ಮತ್ತೆ ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಪ್ರಜ್ವಲ್ ರೇವಣ್ಣನನ್ನು ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆದಿದ್ದು, ಬೆಂಗಳೂರಿನಿಂದ ಹಾಸನಕ್ಕೆ ಕರೆದೊಯ್ದಿದ್ದಾರೆ.

ಹಾಸನದ ಸಂಸದರ ಮನೆಯಲ್ಲಿ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ.

Home add -Advt


Related Articles

Back to top button