Kannada NewsKarnataka NewsLatest

ಪ್ರಕಾಶ ದೇಶಪಾಂಡೆ ಕೊರೋನಾಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ – ಹಿರಿಯ ಕಾಂಗ್ರೆಸ್ ಮುಖಂಡರೂ, ಮಾಜಿ ಪತ್ರಕರ್ತರೂ ಆಗಿದ್ದ ಹುಕ್ಕೇರಿಯ ಪ್ರಕಾಶ ದೇಶಪಾಂಡೆ ನಿಧನರಾಗಿದ್ದಾರೆ.

ಅವರಿಗೆ 70 ವರ್ಷ ವಯಸ್ಸಾಗಿತ್ತು. ಕೊರೋನಾದಿಂದಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Home add -Advt

ವಿವಿಧ ಪತ್ರಿಕೆಗಳಿಗೆ ಬಿಡಿ ವರದಿಗಾರರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ, ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಸೇವಾದಳದಲ್ಲಿ ಕೆಲಸ ಮಾಡಿದ್ದರು.

ಸಧ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹುಕ್ಕೇರಿ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ. ಪರಿಷತ್ತಿನ ಚುನಾವಣೆಯ ಅಭ್ಯರ್ಥಿಯೂ ಆಗಿದ್ದರು.

2-3 ವಾರದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಆದರೆ…

Related Articles

Back to top button