Latest

*ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಪ್ರಮೋದ್ ಮಧ್ವರಾಜ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷಾಂತರ ಪರ್ವ ಜೋರಾಗಿದೆ. ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪ್ರಮೋದ್ ಮಧ್ವರಾಜ್ ಅವರನ್ನು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಮೋದ್ ಮಧ್ವರಾಜ್ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ 7 ಬಾರಿ ಪಕ್ಷ ಬದಲಿಸಿದ್ದಾರೆ. ನಾನು ಹುಟ್ಟಿನಿಂದ ಕಾಂಗ್ರೆಸ್ ನಲ್ಲಿದ್ದೆ. ಈಗ ಬಿಜೆಪಿ ಸೇರಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ 1978ರಲ್ಲಿ ರೈತ ಸಂಘದಲ್ಲಿದ್ದರು. 1983ರಲ್ಲಿ ಭಾರತೀಯ ಲೋಕದಳದಲ್ಲಿದ್ದರು, ಅಹಿಂದ ಸೇರಿಕೊಂಡರು ಹೀಗೆ ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾಗೊಂಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

*ಸಾಕ್ಷಾತ್ಕಾರ ಸಿನಿಮಾ ಖ್ಯಾತಿಯ ನಟಿ ಜಮುನಾ ನಿಧನ*

Home add -Advt

https://pragati.taskdun.com/jamunano-moresakshatkara-actress/

Related Articles

Back to top button