Karnataka NewsLatestPolitics

*BREAKING: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮೈಸೂರು ಜಿಲ್ಲೆಯ ಟಿ.ನರಸೀಪುರ ಗಣೇಶೋತ್ಸವ ವಿವಾದ ಹಾಗೂ ಆನಂತರದ ಬಿಜೆಪಿ ನಾಯಕರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪೊಲಿಸರ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷಕ್ಕೆ ಉತ್ತೇಜನ, ಧಾರ್ಮಿಕ ನಂಬಿಕೆಗಳಿಗೆ ಅವಮಾನ, ಪ್ರಚೋದನಕಾರಿ ಭಾಷಣ ಮಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಟಿ.ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಮಸೀದಿ ರಸ್ತೆಗಳಲ್ಲಿ ಗಣೇಶ ಮೆರವಣಿಗೆ ಹೋಗುವಂತಿಲ್ಲ. ಪೊಲೀಸರು ಸೂಚಿಸಿದ ಮಾರ್ಗದಲ್ಲೇ ಹೋಗಬೇಕು. ಇಲ್ಲವಾದಲ್ಲಿ ಗ್ರಹಚಾರ ಬಿಡಿಸುತ್ತೇನೆ. ನಾವು ಮಾತನಾಡಲ್ಲ, ಮಾಡಿ ತೋರಿಸುತ್ತೇವ್ ಎ ಎಂದು ಗಣೇಶ ಪ್ರತಿಷ್ಠಾಪನೆ ಸಮಿತಿ ಸದಸ್ಯರನ್ನು ಠಾಣೆಗೆ ಕರೆದು ಎಚ್ಚರಿಕೆ ನೀಡಿದ್ದರು.

ಇನ್ಸ್ ಪೆಕ್ಟರ್ ಹೇಳಿಕೆ ಖಂಡಿಸಿ ಅವರ ಅಮಾನತಿಗೆ ಆಗ್ರಹಿಸಿ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರು ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಇನ್ಸ್ ಪೆಕ್ಟರ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಬೃಹತ್ ಶೋಭಾಯಾತ್ರೆಯನ್ನು ನಡೆಸಲಾಗಿತ್ತು. ಈ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

Related Articles

Back to top button