Kannada NewsKarnataka NewsNationalPolitics

*ಏಪ್ರಿಲ್ 1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ಏಪ್ರಿಲ್ 1 ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಭಾಗವಹಿಸಲಿದ್ದಾರೆ.

ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿಗಳು ಮಾರ್ಚ್ 31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ, ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರನೇ ದಿನ, ಏಪ್ರಿಲ್ 1ರಂದು ಬೆಳಗ್ಗೆ ರಾಷ್ಟ್ರಪತಿಗಳು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. 

Home add -Advt

ಶಿವೈಕ್ಯ ಶ್ರೀಗಳ ಗದ್ದಿಗೆಗೆ ದರ್ಶನ ಪಡೆದು, ನಂತರ ಜನ್ಮ ದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳು ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಈ ಕುರಿತು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

Related Articles

Back to top button