
ಪ್ರಗತಿವಾಹಿನಿ ಸುದ್ದಿ: ಗುಜರಾತನ್ ಅಹಮದಾಬಾದನಲ್ಲಿ ನಡೆದ ವಿಮಾನ ದುರಂತದಲ್ಲಿ 265 ಮಂದಿ ಮೃತಪಟ್ಟಿದ್ದು ಇಂದು ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಸ್ಥಳ ಪರಿಶೀಲಿಸಿ ಬಳಿಕ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.