Kannada NewsKarnataka NewsLatestPolitics
*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಶಾಸಕ ಭೈರತಿ ಬಸವರಾಜ್ ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಬಂಧನ ಭೀತಿಯಲ್ಲಿರುವ ಭೈರತಿ ಬಸವರಾಜ್, ತಲೆಮರೆಸಿಕೊಂಡಿದ್ದು, ಕಳೆದ ಒಂದು ವಾರದಿಂದ ದುಬೈನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.


