
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿದೇಶ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ಬಾಸ್ಟನ್ ಗೆ ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ಯಾರಿಸ್ನಲ್ಲಿರುವ ಪ್ರಿಯಾಂಕ್ ಖರ್ಗೆ ಅವರು ಜೂ.16 ರಿಂದ 19ರವರೆಗೆ ಬಾಸ್ಟನ್ನಲ್ಲಿ ನಡೆಯುತ್ತಿದ್ದ ಬಯೋ-2025 ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಿತ್ತು. ರಾಜ್ಯ ಐಟಿ-ಬಿಟಿ ಇಲಾಖೆಯ ಅಧಿಕಾರಿಗಳು ಈಗಾಗಲೇ ಬಾಸ್ಟನ್ ಸೇರಿಕೊಂಡಿದ್ದರು. ಆದರೆ ಪ್ರಿಯಾಂಕ್ ಖರ್ಗೆ ಅವರಿಗೆ ಬಾಸ್ಟನ್ಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಎಕ್ಸ್ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಅನುಮತಿ ನಿರಾಕರಣೆ ಬಗ್ಗೆ ಸದ್ಯಕ್ಕೆ ಯಾವುದೇ ಬಹಿರಂಗ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ನಾನು ಬೆಂಗಳೂರಿಗೆ ಹಿಂತಿರುಗಿದ ನಂತರ, ಅನುಮತಿ ನಿರಾಕರಣೆಯ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ವಿವರಣೆ ಪಡೆದು ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ.