Belagavi NewsBelgaum NewsElection NewsKannada NewsKarnataka NewsPolitics

ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗಾಗಿ ಅಭಿಮಾನಿಗಳಿಂದ ದಂಡ ನಮಸ್ಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗಾಗಿ ಅಭಿಮಾನಿಗಳಿಂದ ದಂಡ ಹಾಕಲಾಯಿತು.

ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದ ಬಜರಂಗ ಶಿಂಗೆ ಹಾಗೂ ರಮೇಶ ಮಾಳಿ, ಪ್ರಿಯಾಂಕಾ ಜಾರಕಿಹೊಳಿ ಅತ್ಯಧಿಕ ಮತಗಳಿಂದ ಗೆಲುವನ್ನು ಸಾಧಿಸಲಿ ಎನ್ನುವ ಉದ್ದೇಶದಿಂದ ದಂಡ ನಮಸ್ಕಾರ ಹಾಕಿದರು.

ಪ್ರಾರಂಭದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅಲ್ಲಿಂದ ಅಕ್ಕೋಳ ಗ್ರಾಮದ ಶ್ರೀ ಸಂತ ಬಾಳುಮಾಮಾ ದೇವಸ್ಥಾನದವರೆಗೆ ದಂಡ ನಮಸ್ಕಾರ ಹಾಕಿ, ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಇದೇ ಸಂಧರ್ಭದಲ್ಲಿ ಮಾತನಾಡಿದ ಅಭಿಮಾನಿಗಳು ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅತ್ಯಧಿಕ ಮತಗಳಿಂದ ಗೆಲವು ಸಾಧಿಸಲಿ ಹಾಗೂ  ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ರಚನೆ ಆಗಲಿ ಎನ್ನುವ ಉದ್ದೇಶದಿಂದ  ಸುಮಾರು 6 ಕೀ ಮೀ ವರೆಗೆ ದಂಡ ನಮಸ್ಕಾರ ಹಾಕಿ ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದೇವೆ ಎಂದರು. 

ಈ ಸಂಧರ್ಭದಲ್ಲಿ ಭಾರತಿ ಬರಗಾಲೆ, ಪ್ರಕಾಶ ಬರಗಾಲೆ, ಬಸವರಾಜ ಬರಗಾಲೆ, ದೀಲಿಪ ವರಾಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button