Belagavi NewsBelgaum NewsKannada NewsKarnataka News

*ಪಾಕ್ ಪರ ಘೋಷಣೆ: ವ್ಯಕ್ತಿಗೆ ಥಳಿಸಿದ ವಕೀಲರು*

ಪ್ರಗತಿವಾಹಿನಿ ಸುದ್ದಿ: ನ್ಯಾಯಾಲಯದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಎನ್ನುವ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ವಕೀಲರೇ ಥಳಿಸಿದ ಘಟನೆ ಬುಧವಾರ ನಡೆದಿದೆ.


ಬೆಳಗಾವಿ ನ್ಯಾಯಾಲಯದ ಆವರಣ ಎಂದಿನಂತೆ ಜನಜಂಗುಳಿಯಿಂದ ಕೂಡಿತ್ತು. ನ್ಯಾಯಾಲಯದ ವಿಚಾರಣೆಗೆ ಬಂದಿದ್ದ ವ್ಯಕ್ತಿಯೋರ್ವ ಪಾಕ್ ಪರ ಘೋಷಣೆ ಕೂಗಿದ ಎನ್ನುವ ಆರೋಪದ ಮೇಲೆ ಬೆಳಗಾವಿ ವಕೀಲರು ಯುವಕನನ್ನು ಥಳಿಸಿದ್ದಾರೆ‌. ಸ್ಥಳಕ್ಕೆ ಆಗಮಿಸಿದ ಎಪಿಎಂಸಿ ಪೊಲೀಸರು ಯುವಕನನ್ನು ಕರೆದೊಯ್ದರು.

ನಿತೀನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕುಮಾರ್ ಗೆ ಜೀವ ಬೇದರಿಕೆ ಹಾಕಿದ್ದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ಆರೋಪಿ ಜಯೇಶ್ ಪೂಜಾರಿ ಪಾಕ್ ಪರ ಘೋಷಣೆ ಕೂಗಿದ್ದಾನೆ. ಸದ್ಯ ಪೊಲಿಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button