
ಪ್ರಗತಿವಾಹಿನಿ ಸುದ್ದಿ: ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ತಡರಾತ್ರಿ ಕಾರಾಗೃಹ ಅಧೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಚಾನಕ್ ತಪಾಸಣೆ ನಡೆಸಿದ್ದು ಈ ವೇಳೆ ಕೈದಿಗಳ ಬಳಿಯಿದ್ದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.
ಪೊಲೀಸ್ ತಪಾಸಣೆಯ ವೇಳೆ 2 ಮೊಬೈಲ್ ಫೋನ್ಗಳು, 1 ಸಿಮ್ ಕಾರ್ಡ್ ಹಾಗೂ 1 ಕೇಬಲ್ ರಹಿತ ಚಾರ್ಜರ್ ವಶಪಡಿಸಿಕೊಳ್ಳಲಾಗಿದೆ. ಕಾರಾಗೃಹ ಆವರಣದಲ್ಲಿ ಮೊಬೈಲ್ ಬಳಕೆ ಕಟ್ಟುನಿಟ್ಟಾಗಿ ನಿಷೇಧಿತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಸಂಪೂರ್ಣ ವಿವರವನ್ನು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರಿಗೆ ವರದಿ ಮಾಡಲಾಗಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ಮಾಹಿತಿ ನೀಡಿದ್ದಾರೆ.

