Latest

ಮುಂದಿನ 45 ದಿನ ರಾಜ್ಯಕ್ಕೆ ನಿರ್ಣಾಯಕ

ಜನವರಿಯಲ್ಲಿ ಅಪ್ಪಳಿಸಲಿದೆ ಎರಡನೇ ಅಲೆ?

 

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜನವರಿ-ಫೆಬ್ರವರಿ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆಯಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

Home add -Advt

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜನವರಿಯಿಂದ ಕೊರೊನಾ ಎರಡನೇ ಅಲೆ ಆರಂಭವಾಗಲಿದೆ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಕೊರೊನಾ ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಿದೆ. ಮದುವೆ, ಇನ್ನಿತರ ಸಮಾರಂಭಗಳಿಗೆ ನೂರಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ರಾಜಕೀಯ ಕಾರ್ಯಕ್ರಮಗಳಿಗೆ 200 ಜನರಿಗೆ ಮಿತಿ ಹೇರಲಾಗಿದೆ ಎಂದು ತಿಳಿಸಿದರು.

ಮುಂದಿನ 45 ದಿನ ರಾಜ್ಯಕ್ಕೆ ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ನೈಟ್ ಕರ್ಫ್ಯೂ ಜಾರಿ ಸಧ್ಯಕ್ಕೆ ಪ್ರಸ್ತಾಪವಿಲ್ಲ, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Related Articles

Back to top button