Kannada NewsLatest

ಸಾಹುಕಾರ್ ಸಕ್ಕರೆ ಕಾರ್ಖಾನೆ ದಿವಾಳಿಯಾಗಿದೆ ಎಂದು ಜಾಹೀರಾತು; ಮೊದಲು ಸಿಎಂ, ಸಹಕಾರ ಸಚಿವರು ಉತ್ತರಿಸಲಿ; ಡಿ.ಕೆ.ಶಿವಕುಮಾರ್ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮೆಂಟಲ್ ಯತ್ನಾಳ್ ಮೇಲೆ‌ ಒಂದು ಕೋಟಿ‌ ರೂ. ದಂಡ ಕಟ್ಟಿ 200 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿಕೆ‌ ಮಾಡಿದ್ದೆ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದರು.

ಬೆಳಗಾವಿ  ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಯತ್ನಾಳ್ ಮುಖ್ಯಮಂತ್ರಿಯಾದರೆ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿಯನ್ನು ಜೆಸಿಬಿಯಿಂದ ನೆಲಸಮ ಮಾಡುತ್ತಾರಂತೆ ಎಂಬ  ಹೇಳಿಕೆಗೆ ಯತ್ನಾಳ್ ಮುಖ್ಯಮಂತ್ರಿ ಆಗುವವರೆಗೂ ಕಾಯೋದು ಬೇಡಾ. ನಿಮ್ಮದೆ ಸರಕಾರ ಇದೆ ಮಾಡಿ ತೋರಿಸಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ಎಲ್ಲದಕ್ಕೂ ಬೆಲೆ ನಿಗದಿಯಾಗಿದೆ. ಪಿಎಸ್ ಐ ನೇಮಕದಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಎಲ್ಲಿಯವರೆಗೆ ಎಂದರೆ ಮುಖ್ಯಮಂತ್ರಿ ಹಾಗೂ ಸಚಿವರಾಗಲು ಕೂದ ಹಣ ನೀಡಬೇಕು. ಸ್ವತ: ಬಿಜೆಪಿ ಶಾಸಕರೆ ಈ ಬಗ್ಗೆ ಹೇಳಿಕೆ ಕೊಡುತ್ತಿದ್ದಾರೆ ಎಂದರೆ ಈ ಕುರುತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಮಾಜಿ ಕೇಂದ್ರ ಸಚಿವರಾಗಿರುವ ಶಾಸಕ ಯತ್ನಾಳ್ ಮುಖ್ಯಮಂತ್ರಿಯಾಗಲು 2,500 ಕೋಟಿ ರೂ ಕೊಡಬೇಕು ಎಂದು ಹೇಳಿದ್ದಾರೆ. ಈ  ಬಗ್ಗೆ ಇಡಿ, ಐಟಿ ಅಧಿಕಾರಿಗಳು ತನಿಖೆ ನಡೆಸಲಿ ಎಂದರು.

Home add -Advt

ಅಪೆಕ್ಸ್ ಬ್ಯಾಂಕ್ ನವರು ಡಿಸಿಗೆ ಪತ್ರ ಬರೆದಿದ್ದಾರೆ. ಮಾಜಿ ಸಚಿವರು ಕೋಟ್ಯಂತರ ರೂ. ನೀಡಬೇಕೆಂದು ತಿಳಿಸಿದರೂ ಸಹಕಾರ ಸಚಿವರು, ಮುಖ್ಯಮಂತ್ರಿಗಳು ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದ ಅವರು ಸರಕಾರ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಕೂಡಲೇ ಮುಖ್ಯಮಂತ್ರಿ ಹಾಗೂ ಸಹಕಾರ ಸಚಿವರು ಉತ್ತರ ಕೊಡಬೇಕು. ಕೂಡಲೇ ಅವರ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಬೇಕು. ಯಾವ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಒತ್ತಾಯಿಸುತ್ತೇನೆ. ರೈತರಿಗೆ ಹಣ ಕೊಡಿಸಬೇಕು. ಸೌಭಾಗ್ಯ ಸಕ್ಕರೆ ಕಾರ್ಖಾನೆಯ ಮೇಲೆ ರಕ್ಷಣೆ ನೀಡಿದರೆ ನಮ್ಮ‌ ಹೋರಾಟ ಮುಂದುವರೆಯುತ್ತದೆ ಎಂದು ಪರೋಕ್ಷವಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ  ತಿರುಗೇಟು ನೀಡಿದರು.

ಬೆಳಗಾವಿ ಜನ ಅವರನ್ನು ಸಾಹುಕಾರ್ ಎಂದು ಕರೆಯುತ್ತಾರೆ. ಆದರೆ ತಮ್ಮ ಸಕ್ಕರೆ ಕಾರ್ಖಾನೆ ದಿವಾಳಿಯಾಗಿದೆ ಎಂದು ಮೊನ್ನೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಾರೆ. ಅವರ ಸದರಿ ಜಾಹೀರಾತಿಗೆ ಮೊದಲು ಸಿಎಂ ಬೊಮ್ಮಾಯಿ ಹಾಗು ಸಹಕಾರ ಸಚಿವರು ಉತ್ತರಿಸಲಿ ಎಂದು ಆಗ್ರಹಿಸಿದರು.

ಈ ವೇಳೆ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್, ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ‌ ಚನ್ನರಾಜ ಹಟ್ಟಿಹೊಳಿ,ಮಾಜಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಶಾಸಕ ಫಿರೋಜ್ ಸೇಠ್, ಲಕ್ಷ್ಮಣ ರಾವ್ ಚಿಂಗಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button