Belagavi NewsBelgaum NewsKannada NewsKarnataka News

*ಬಾಂಗ್ಲಾ ಹಿಂದುಗಳ ರಕ್ಷಣೆ ಮಾಡಿ: ವಿಶ್ವ ಹಿಂದು ಪರಿಷತ್ ಭಜರಂಗದಳ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಂಗ್ಲಾದೇಶದಲ್ಲಿ ಇರುವ ಹಿಂದುಗಳ ಮೇಲೆ ಹಾಗೂ ಹಿಂದು ದೇವಸ್ಥಾನದ ಮೇಲೆ ಆಗಿರುವ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಭಜರಂಗದಳ ವತಿಯಿಂದ ಪ್ರಭಟನೆ ಮಾಡಲಾಯಿತು. 

ಇಂದು ಬೆಳಗಾವಿ ಡಿಸಿ ಕಚೇರಿ ಬಳಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್  ಭಜರಂಗದಳದ ಜಿಲ್ಲಾಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ ಅವರು, ಬಾಂಗ್ಲಾದೇಶದ ಹಿಂದುಗಳ ಮನೆಗಳು, ಅಂಗಡಿಗಳು, ಕಚೇರಿಗಳು, ವಾಣಿಜ್ಯ ಸಂಸ್ಥೆಗಳು, ಮಹಿಳೆಯರು ಸೇರಿದಂತೆ ಮಕ್ಕಳ ಮೇಲೆ ಹಲ್ಲೆ ನಡೆದಿದ್ದು, ಖಂಡನೀಯ. ಬಾಂಗ್ಲಾದಲ್ಲಿ ಇರುವ ಅಲ್ಪಸಂಖ್ಯಾತ ಹಿಂದುಗಳ ರಕ್ಷಣೆಗೆ ಭಾರತ ಸರ್ಕಾರ ಮುಂದಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಜಿಲ್ಲಾಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ ಅವರು ಆಗ್ರಹಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button