
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಓಡಿಶಾದ ಯುವತಿಯ ಮೇಲಿನ ಅತ್ಯಾಚಾರ ಖಂಡಿಸಿ, ಬೆಳಗಾವಿಯಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಗಿದೆ.
ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಓಡಿಶಾದ ಎನ್ ಎಸ್ ಯು ಐ ಅಧ್ಯಕ್ಷ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆತನ ಮೇಲೆ ಇನ್ನೂ ಕ್ರಮ ಕೈಗೊಂಡಿಲ್ಲ. ಮಾರ್ಚ್ 2025 ರಲ್ಲಿ ಘಟನೆ ನಡೆದರೂ ಸಹ ಇನ್ನೂ ಕ್ರಮ ಕೈಗೊಂಡಿಲ್ಲ. ಇಂಜಿನಿಯರಿಂಗ್ ಓದುತ್ತಿದ್ದ ಯುವತಿಗೆ ಡ್ರಗ್ ನೀಡಿ ಅತ್ಯಾಚಾರ ನಡೆಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಏನು ಕ್ರಮ ಕೈಗೊಳ್ಳುತ್ತೆ ಕಾದು ನೋಡಬೇಕು. ಸಮಾಜದಲ್ಲಿ ಒಳ್ಳೆಯವರನ್ನು ಬೆಳೆಸೋದು ಬಿಟ್ಟು ಕಾಂಗ್ರೆಸ್ ನಾಯಕರು ರೆಪಿಸ್ಟ್ ಗಳನ್ನು ಬೆಳೆಸುತ್ತಿದ್ದಾರೆ. ಇದೇ ರೀತಿ ಇವರು ಮುಂದುವರೆದರೆ ಉಗ್ರವಾದ ಹೋರಾಟ ಮಾಡುತ್ತೆವೆ ಎಂದು ಎಬಿವಿಪಿ ಕಾರ್ಯಕರ್ತರು ಎಚ್ಚರಿಸಿದರು.