
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ್ಯಾಲಿ ನಡೆಸಿದರು.

ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ ಹಾಗೂ ಇಂಧನ ಬೆಲೆ ಏರಿಕೆ ಕೂಡಲೇ ಕಡಿಮೆ ಮಾಡಬೇಕೆಂದು ಆಗ್ರಹಿಸಿ, ಕಾಂಗ್ರೆಸ್ ಭವನ ಆವರಣದಲ್ಲಿ ಕಟ್ಟಿಗೆ ಒಲೆ ಮೇಲೆ ” ಚಹಾ ” ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಕೊರೋನಾದಿಂದ ಉದ್ಯೋಗ ಕಳೆದುಕೊಂಡು ಕೋಟ್ಯಾಂತರ ಯುವಕರು ಮನೆಯಲ್ಲಿದ್ದಾರೆ. ಈ ಸಂದಿಗ್ದ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಕಡು ಬಡವರು ಜೀವನ ನಡೆಸುವುದು ಕಷ್ಟಕರವಾಗಿದೆ. ಈ ದುರಾಡಳಿತ ಸರ್ಕಾರವನ್ನು ಕಿತ್ತೆಸೆಯಬೇಕೆಂದು ಎಂದು ಕಿಡಿ ಕಾರಿದರು.
ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಅಂಜಲಿ ನಿಂಬಾಳಕರ್ ಹಾಗೂ ರಾಜು ಶೇಠ್, ವಿನಯ ನಾವಲಗಟ್ಟಿ, ಸುನೀಲ್ ಹನ್ನಮ್ಮಣವರ, ಬಾಬಾಸಾಹೇಬ ಪಾಟೀಲ, ಜಯಶ್ರೀ ಮಾಳಗಿ, ವಿಜಯ ಕುಮಾರ್ ಹುಣಶ್ಯಾಳ, ಕಲ್ಲಪ್ಪ ವಕ್ಕಾರ್, ಬಾಳೇಶ ದಾಸನಟ್ಟಿ, ಐಷಯಾ ಸನದಿ, ಹಾಗೂ ನೂರಾರು ಕಾರ್ಯಕರ್ತರು ಸೈಕಲ್ ರ್ಯಾಲಿ ಭಾಗಿಯಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ