Kannada NewsKarnataka NewsLatest

*PSI ಮಗನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧ ಬಲಿ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಹಿಳಾ ಪಿಎಸ್ಐ ಪುತ್ರನ ವ್ಹೀಲಿಂಗ್ ಪುಂದಾಟಕ್ಕೆ ವೃದ್ಧ ರೈತರೊಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೊಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೈಯ್ಯದ್ ಐಮಾನ್ ಬಂಧಿತ ಆರೋಪಿ. ನಂಜನಗೂಡು ಸಂಚಾರಿ ವಿಭಾಗದ ಪಿಎಸ್ ಐ ಯಾಸ್ಮಿನ್ ತಾಜ್ ಅವರ ಪುತ್ರ ಸೈಯ್ಯದ್ ಐಮಾನ್, ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ವೇಳೆ ಗುರುಸ್ವಾಮಿ ಎಂಬ ವೃದ್ಧನಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿದ್ದರು. ಈ ಕುರಿತು ಗುರುಸ್ವಾಮಿ ಪುತ್ರ ಮಹದೇವಸ್ವಾಮಿ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಡರಾತ್ರಿ ಆರೋಪಿ ಸಯ್ಯದ್ ಐಮಾನ್ ನನ್ನು ಬಂಧಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಪಿಎಸ್ಐ ಯಾಸ್ಮಿನ್ ತಾಜ್ ಅವರನ್ನು ವರ್ಗವಣೆ ಮಾಡಿ ಆದೆಶ ಹೊರಡಿಸಲಾಗಿದೆ.

ನಂಜನಗೂಡು ಸಂಚಾರಿ ವಿಭಾಗದ ಪಿಎಸ್ ಐ ಆಗಿದ್ದ ಯಾಸ್ಮಿನ್ ಅವರನ್ನು ಜಿಲ್ಲಾ ಅಪರಾಧ ದಾಖಲೆಗಳ ವಿಭಾಗಕ್ಕೆ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button