
ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಕೆಲವೇ ಕ್ಷಣಗಳಲ್ಲಿ ಘೋಷಣೆಯಾಗಲಿದೆ. ಚುನಾವಣೆ ಆಯೋಗ ಇಂದು ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದು, ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಮುಖ್ಯ ಚುನಾವಣೆ ಆಯುಕ್ತ ರಾಜೀವ ಕುಮಾರ ಚುನಾವಣೆ ಪ್ರಕ್ರಿಯೆ ಘೋಷಣೆ ಮಾಡಲಿದ್ದಾರೆ.
ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಮೇ ಮೊದಲ ವಾರ ಚುನಾವಣೆ ನಿಗದಿಯಾಗಬಹುದು.