Latest

*ಪಿಎಸ್ಐ ಅವಿನಾಶ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಆರೋಪದಲ್ಲಿ ಪಿಎಸ್ಐ ಅವಿನಾಶ್ ಕಾಂಬ್ಳೆ ಅವರನ್ನು ಅಮಾನತು ಮಾಡಿಆದೇಶ ಹೊರಡಿಸಲಾಗಿದೆ.

ರಾಯಚೂರು ಗ್ರಾಮಾಂತರ ವ್ಯಾಪ್ತಿಯ ಇಡಪನೂರು ಪೊಲಿಸ್ ಠಾಣೆ ಪಿಎಸ್ ಐ ಅವಿನಾಶ್ ಕಾಂಬ್ಳೆ ಅಮಾನತುಗೊಂಡವರು.

ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಮಿರ್ಜಾಪುರ ಗ್ರಾಮದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಓರ್ವ ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದರು. ಗಲಾಟೆ ವೇಳೆ ಮೃತ ಭೀಮೇಶ್ ಕುಟುಂಬದವರು ಪೊಲೀಸರಿಗೆ ಕರೆ ಮಾಡಿದ್ದರು. ಆದಾಗ್ಯೂ ಪಿಎಸ್ಐ ಅವಿನಾಶ್ ಸೂಕ್ತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದರು ಎನ್ನಲಾಗಿದೆ.

ಆಂತರಿಕ ತನಿಖೆ ವೇಳೆ ಪಿಎಸ್ಐ ಅವಿನಾಶ್ ಕಾಂಬ್ಳೆ ನಿರ್ಲಕ್ಷ್ಯ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಅವಿನಾಶ್ ಕಾಂಬ್ಳೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button