Latest

*ರೈಲು ಸಂಚಾರ ಸ್ಥಗಿತದಿಂದ ಸಂಕಷ್ಟಕ್ಕೀಡಾಗಿದ್ದ ಕ್ರೀಡಾಪಟುಗಳು ರಾಜ್ಯಕ್ಕೆ ಆಗಮನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:  ಓಡಿಶಾ ರೈಲು ದುರಂತ ಪ್ರಕರಣ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ-ಒಡಿಶಾ-ಕರ್ನಾಟಕ ರೈಲು ಮಾರ್ಗ ಸಂಚಾರ ಸ್ಥಗಿತ ಕಾರಣದಿಂದ ಹೌರಾದಿಂದ ಬೆಂಗಳೂರಿಗೆ ಬರಲು ಪರದಾಡಿದ್ದ ವಾಲಿಬಾಲ್ ಕ್ರೀಡಾಪಟುಗಳು ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದಾರೆ.

ರೈಲು ಸಂಚಾರ ಸ್ಥಗಿತದಿಂದಾಗಿ ಕರ್ನಾಟಕ ಸರ್ಕಾರ ಕ್ರೀಡಾಪಟುಗಳನ್ನು ವಿಮಾನದ ಮೂಲಕ ಕ್ರೀಡಾಪಟುಗಳನ್ನು ರಾಜ್ಯಕ್ಕೆ ಕರೆ ತಂದಿದೆ.

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗಾಗಿ 16 ವರ್ಷದ ಒಳಗಿನ ಬಾಲಕರ ಹಾಗೂ ಬಾಲಕಿಯರ ತಂಡ ಸೇರಿದಂತೆ 24 ಕ್ರೀಡಾಪಟುಗಳು ಹಾಗೂ 6 ಜನ ಕೋಚ್ ಗಳು ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರಲು ರೈಲು ಸಿಗದೇ ಪರದಾಡಿದ್ದರು. ಈ ಬಗ್ಗೆ ವಿಡಿಯೋ ಮೂಲಕವಾಗಿ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಕ್ರೀಡಾಸಚಿವರು ವಿಮಾನ ಮೂಲಕ ಕ್ರೀಡಾಪಟುಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕಕ್ಕೆ ಕರೆ ತಂದಿದ್ದಾರೆ.

 

Home add -Advt

https://pragati.taskdun.com/mandyalorrycaraccident4-people-death/

 

Related Articles

Back to top button