Latest
ವಿಜಯಪುರದಲ್ಲಿ ಅಗ್ನಿ ದುರಂತ; ಇಬ್ಬರು ಸಜೀವದಹನ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಇಬ್ಬರು ಸಜೀವದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಹೊರವಲಯದ ಬಸವನಬಾಗೇವಾಡಿ ಕ್ರಾಸ್ ಬಳಿ ನಡೆದಿದೆ.
ಅಂಗಡಿಯಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದೆ. ಅಂಗಡಿಯಲ್ಲಿ ಮಲಗಿದ್ದ ಅಸೋಕ್ ದೆಸ್ನೋಯಿ (35), ಲಿಂಬಾರಾಮ ದೆಸ್ನೋಯಿ (35) ಸಜೀವದಹನಗೊಂಡಿದ್ದಾರೆ. ಬೆಂಕಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದ ಮಹಿಳೆ; ಆತ್ಮಹತ್ಯೆಗೆ ಯತ್ನ




