Kannada NewsKarnataka NewsLatest

*ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿ ಪಟ್ಟಣದಲ್ಲಿ ನಡೆದಿದೆ

ಪುತ್ತೂರಿನ ಸೆಂಟ್ ಫಿಲೋಮಿಯಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಜಾ (17) ಮೃತಳು. ಉಪ್ಪಿನಂಗಡಿ ಉದ್ಯಮಿ ದಾವೂದ್ ಎಂಬುವವರ ಪುತ್ರಿ.

ನಿನ್ನೆ ತಡರಾತ್ರಿವರೆಗೂ ವಿದ್ಯಾಭ್ಯಾಸ ಮಾಡಿ ಮಲಗಿದ್ದ ಹಫೀಜಾ, ಬೆಳಿಗ್ಗೆ ಎಷ್ಟು ಹೊತ್ತಾದರೂ ಎದ್ದಿಲ್ಲ. ಮಲಗಿದ್ದ ಸ್ಥಿತಿಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿಸುಬಂದಿದೆ.

Related Articles

Back to top button