Latest

ಪಿಯುಸಿ ಮೌಲ್ಯಮಾಪನ ಮಾಡಲ್ಲ ಎಂದ ಉಪನ್ಯಾಸಕರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಪಿಯುಸಿ ಉಪನ್ಯಾಸಕರು ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ನಿರ್ಧರಿಸಿದ್ದಾರೆ.

ಕೊರೊನಾ ಸೋಂಕು ಸಮುದಾಯಕ್ಕೆ ಹರಡುತ್ತಿರುವುದರಿಂದ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ಇಂದಿನಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘ ನಿರ್ಧಾರ ಮಾಡಿದೆ.

ಬೆಂಗಳೂರಿಗೆ ಬಂದು ಮೌಲ್ಯಮಾಪನ ಮಾಡುವ ಉಪನ್ಯಾಸಕರಿಗೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕೊರೊನಾ ಸಮಯದಲ್ಲಿ ಸರ್ಕಾರದ ಈ ನಡೆಗೆ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅವಕಾಶ ಕೊಡಿ. ಇಲ್ಲವೇ ಕೊರೊನಾ ಕಡಿಮೆ ಆಗುವವರೆಗೂ ಮೌಲ್ಯಮಾಪನ ಸ್ಥಗಿತ ಮಾಡಿ ಎಂದು ಸರ್ಕಾರಕ್ಕೆ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಆಗ್ರಹಿಸಿದ್ದಾರೆ.

Home add -Advt

Related Articles

Back to top button