Kannada NewsKarnataka NewsLatest
*ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಾಪುರದಲ್ಲಿ ನಡೆದಿದೆ.
ಝಾನ್ಸಿ ಮೃತ ವಿದ್ಯಾರ್ಥಿನಿ. ದ್ವಿತಿಯ ಪಿಯುಸಿ ಓದುತ್ತಿದ್ದಳು. ಕಾಲೇಜಿನಿಂದ ಮನೆಗೆ ವಾಪಾಸ್ ಆದ ವಿದ್ಯಾರ್ಥಿನಿ ’ನಾನು ಯಾರಿಗೂ ಮೋಸ ಮಾಡಿಲ್ಲ, ಆಲ್ ಫ್ರೆಂಡ್ಸ್ ಮಿಸ್ ಯೂ’ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಲ್ಲಿ ಯಾರೂ ಇಲ್ಲದೇ ವೇಳೆ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ದೊಡ್ಡಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




