Latest

*ಹಾಡ ಹಗಲೇ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಕಾಲ್ ಸೆಂಟರ್ ಉದ್ಯೋಗಿ*

ಪ್ರಗತಿವಾಹಿನಿ ಸುದ್ದಿ: ಕಾಲ್ ಸೆಂಟರ್ ಉದ್ಯೋಗಿಯೊಬ್ಬ ತನ್ನ ಸಹೋದ್ಯೋಗಿ ಯುವತಿಯನ್ನು ಹಾಡ ಹಗಲೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಪುಣೆಯಲ್ಲಿ ನಡೆದಿದೆ.

Home add -Advt

ಬಿಪಿಒ ಉದ್ಯೋಗಿಯಾಗಿದ್ದ ಯುವತಿಯನ್ನು ಆಕೆಯ ಸಹೋದ್ಯೋಗಿಯೇ ಕೊಲೆ ಮಡಿದ್ದಾನೆ. 28 ವರ್ಷದ ಯುವತಿ ಕಂಪನಿಯ ಪಾರ್ಕಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮೃತ ಯುವತಿಯನ್ನು ಕತ್ರಜ್ ನಿವಾಸಿ ಶುಭದಾ ಶಂಕರ್ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಕೃಷ್ಣ ಸತ್ಯನಾರಾಯಣ್ ಕನೋಜ ಎಂದು ಗುರುತಿಸಲಾಗಿದೆ. ಮೃತ ಯುವತಿ ಹಾಗೂ ದಳಿ ನಡೆಸಿದ ಯುವಕ ಇಬ್ಬರೂ ಒಂದೇ ಕಂಪನಿಯಲ್ಲಿ ಲೆಕ್ಕಪರಿಶೋಧಕರಾಗಿ ಕೆಲಸ ಮಡುತ್ತಿದ್ದರು. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆ ನಡೆದಿದೆ.

Related Articles

Back to top button