Kannada NewsLatest

ಬಿಎಸ್ ವೈ ಮಾರ್ಗದರ್ಶನ; ಬೊಮ್ಮಾಯಿ ಸರ್ಕಾರ ಒಪ್ಪಿದ ಮತದಾರರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿರುವುದು ಸಂತಸದ ವಿಚಾರ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಬಿಜೆಪಿ ಗೆಲುವು ಖಚಿತ. ಬೊಮ್ಮಾಯಿ ಸರ್ಕಾರಕ್ಕೆ ಮತದಾರರು ಸಮ್ಮತಿ ನೀಡಿದ್ದಾರೆ ಎಂಬುದು ಸಾಬೀತಾಗಿದೆ ಎಂದರು.

Home add -Advt

ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಬಿಎಸ್ ವೈ ಅವರ ಮಾರ್ಗದರ್ಶನದ ಫಲ. ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಮತದಾರರು ಓಕೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಮನೆಗೆ ಹೋಗುವಂತೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಇನ್ನಷ್ಟು ಹೀನಾಯ ಸೋಲಾಗಲಿದೆ ಎಂದು ಹೇಳಿದರು.
ಬೆಳಗಾವಿಯನ್ನು ಸರ್ವಾಂಗ ಸುಂದರವಾಗಿ ರೂಪಿಸಲು ಜನರು ಆಶಿರ್ವದಿಸಿದ್ದಾರೆ – ಕಾರಜೋಳ

Related Articles

Back to top button