Kannada NewsLatestNational

*ದೋಣಿ ಮುಳುಗಿ ದುರಂತ: ಮೂವರು ಮೀನುಗಾರರು ಕಣ್ಮರೆ*

ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆಯಾಗಿ ಮೂವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್ ಬಳಿ ಈ ಘಟನೆ ನಡೆದಿದೆ. ಮೀನುಗಾರಿಕಾ ದೋಣಿಯಲ್ಲಿ 8 ಜನರಿದ್ದರು. ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದಿದೆ. ತಕ್ಷಣ ಐವರು ಮೀನುಗಾರರು ಈಜಿ ದಡ ಸೇರಿದ್ದಾರೆ. ಉಳಿದ ಮೂವರು ನಾಪತ್ತೆಯಾಗಿದ್ದಾರೆ.

Home add -Advt

ನಾಪತ್ತೆಯಾಗಿರುವ ಮೂವರು ಮೀನುಗಾರರಿಗೆ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ. ಭಾರಿ ಮಳೆಯಿಂದಾಗಿ ಸಮುದ್ರದಲ್ಲಿ ಅಲೆಗಳು ಅಬ್ಬರ ಜೋರಾಗಿದೆ. ಮೀನುಗಾರಿಕೆಗೆ ತೆರಳದಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದ್ದರೂ ನಿರ್ಲಕ್ಷ್ಯವಹಿಸಿ ನೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ.

Related Articles

Back to top button