Kannada NewsKarnataka NewsLatestPolitics

*15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಬಿಜೆಪಿ ಮುಖಂಡ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 15 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ ಮಾಜಿ ರೌಡಿ ಶೀಟರ್, ಬಿಜೆಪಿ ಮುಖಂಡನೋರ್ವನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ಆನಂದ್ ಬಂಧಿತ ಆರೋಪಿ. ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಜಿ ರೌಡಿಶೀಟರ್ ಆಗಿದ್ದ ಆನಂದ್ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿದ್ದ. ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದು, ರಿಯಲ್ ಎಸ್ಟೇಟ್ ನಲ್ಲಿಯು ತೊಡಗಿಸಿಕೊಂಡಿದ್ದ.

ನಿರ್ಮಾಣ ಹಂತದ ಕಟ್ಟಡದ ಮಾಲೀಕರೊಬ್ಬರಿಗೆ 15 ಲಕ್ಷ ಹಫ್ತಾ ನೀಡುವಂತೆ ಕಳೆದ ಮೂರು ತಿಂಗಳಿಂದ ಬೆದರಿಕೆ ಹಾಕುತ್ತಿದ್ದ ಬಗ್ಗೆ ಆನಂದ್ ವಿರುದ್ಧ ರಾಜಸ್ಥಾನ ಮೂಲದ ಚೌದರಿ ಎಂಬುವವರು ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಆರೋಪಿ ಆನಂದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆನಂದ್ ವಿರುದ್ಧ 2005ರಲ್ಲಿ ರೌಡಿಶೀಟರ್ ತೆರೆಯಲಾಗಿತ್ತು. 2006ರಲ್ಲಿ ರೌಡಿಶೀಟ್ ಪಟ್ಟಿಯಿಂದ ಆತನ ಹೆಸರು ತೆಗೆಯಲಾಗಿತ್ತು ರಿಯಲ್ ಎಸ್ಟೇಟ್ ಸೇರಿದಂತೆ ಹಲವು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಆನಂದ್, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ.

Home add -Advt

Related Articles

Back to top button