Kannada NewsKarnataka NewsLatestPolitics

*ವಿಪಕ್ಷ ನಾಯಕ ಆರ್.ಅಶೋಕ್ ಗೆ ಅನಾರೋಗ್ಯ: ಎಲ್ಲಾ ಕಾರ್ಯಕ್ರಮಗಳು ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಅನಾರೋಗ್ಯಕ್ಕಿಡಾಗಿದ್ದು, ಇಂದಿನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ವಿಪಕ್ಷ ನಾಯಕ ಅಶೋಕ್ ಜ್ವರದಿಂದ ಬಳಲುತ್ತಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಕಚೇರಿಯಲ್ಲಾಗಲಿ ಅಥವಾ ವಿಪಕ್ಷ ನಾಯಕರ ಕಚೇರಿಯಲ್ಲಾಗಲಿ ಭೇಟಿಗೆ ಲಭ್ಯವಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಅವರು ಗುಣಮುಖರಾಗುವವರೆಗೂ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ.


Home add -Advt

Related Articles

Back to top button