Kannada NewsLatestNationalPolitics

*ರಾಹುಲ್ ಗಾಂಧಿ ಬೆಂಗಾವಲು ವಾಹನದ ಮೇಲೆ ದಾಳಿ ; ಕಿಡಿಗೇಡಿಗಳಿಂದ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Home add -Advt

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಬೆಂಗಾವಲು ವಾಹನದ ಗಾಜುಗಳು ಪುಡಿ ಪುಡಿಯಾಗಿವೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ ಬೆಂಗಾವಲು ಪಡೆ ಗುರಿಯಾಗಿಸಿ ಕಿಡಿಗೇಡಿಗಳು ಈ ದಾಳಿ ನಡೆಸಿದ್ದಾರೆ. ಮಣಿಪುರದಿಂದ ಆರಂಭವಾಗಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಪಶ್ಚಿಮ ಬಂಗಾಳ ತಲುಪಿದ್ದು, ಈ ವೇಳೆ ಮಾಲ್ಡಾದಲ್ಲಿ ಈ ಘಟನೆ ನಡೆದಿದೆ.


Related Articles

Back to top button