GIT add 2024-1
Kore@40
Beereshwara 33

*ರೈತರ ಸಾಲ ಮನ್ನಾ, ಮಹಿಳೆಯರಿಗೆ ಗೃಹಲಕ್ಷ್ಮೀ ಜೊತೆ ಮಹಾಲಕ್ಷ್ಮೀ ಯೋಜನೆ, ನಿರುದ್ಯೋಗಿಗಳಿಗೆ ಉದ್ಯೋಗ; ರಾಹುಲ್ ಗಾಂಧಿ ಗ್ಯಾರಂಟಿ ಘೋಷಣೆ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಮಹಿಳೆಯರಿಗೆ ಗೃಹ ಲಕ್ಷ್ಮೀ ಜೊತೆಗೆ ಮಹಾಲಕ್ಷ್ಮೀ ಯೋಜನೆ, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವುದಗಿ ತಿಳಿಸಿದರು.

ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ 24 ಸಾವಿರ ರೂಪಾಯಿ ಖಾತೆಗೆ ಜಮೆ ಮಾಡಲಾಗುವುದು. ನಿರುದ್ಯೋಗಿ ಪದವೀಧರರಿಗೆ ಸಂಬಳ ಸಹಿತ ತರಬೇತಿ ನೀಡಿ ಉದ್ಯೋಗ ನೀದಲಾಗುವುದು ಎಂದು ತಿಳಿಸಿದರು.

Emergency Service

ದೇಶಾದ್ಯಂತ ರೈತರ ಸಾಲ ಮನ್ನಾ ಮಾಡುತ್ತೇವೆ. ಅಷ್ಟೇ ಅಲ್ಲ ದೇಶಾದ್ಯಂತ ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಳಿ ನಡೆಸಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಕೇವಲ 20-25 ಉದ್ಯಮಿಗಳ ಏಳಿಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ ದೇಶದ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಕಿಡಿಕಾರಿದರು.


Laxmi Tai add
Bottom Add3
Bottom Ad 2