Kannada NewsKarnataka NewsLatest

*ಲಂಚ ಪಡೆದು ಪರಾರಿಯಾಗಲು ಯತ್ನ: ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ಲಂಚ ಪಡೆದು ಪರಾರಿಯಾಗುತ್ತಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಚೇಸ್ ಮಾಡಿ ಬಂಧಿಸಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಬಂಧಿತ ಅಧಿಕಾರಿ. ಈ- ಖಾತೆ ಮಾಡಿಕೊಡಲು ಸುರೇಶ್ ಶೆಟ್ಟಿ ರಾಘವೇಂದ್ರ ರೆಡ್ಡಿ ಎಂಬುವವರಿಗೆ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1 ಲಕ್ಷ ರೂ ಕ್ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಪರಾರಿಯಾಗಿತ್ತಿದ್ದ ಸುರೇಶ್ ಶೆಟ್ಟಿಯನ್ನು ಅಧಿಕಾರಿಗಳು ಕಾರಿನಲ್ಲಿ ಚೇಸ್ ಮಾಡಿ ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Home add -Advt


Related Articles

Back to top button