Latest

ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಪುಣ್ಯಸ್ನಾನಕ್ಕೆಂದು ಕೃಷ್ಣಾನದಿಗೆ ಇಳಿದಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನ ಶಕ್ತಿನಗರದ ಬಳಿ ಕೃಷ್ಣಾನದಿಯಲ್ಲಿ ನಡೆದಿದೆ.

ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ನದಿಸ್ನಾನಕ್ಕಾಗಿ ಐದಾರು ಸ್ನೇಹಿತರು ಕೃಷ್ಣಾನದಿಗೆ ಇಳಿದಿದ್ದಾರೆ. ಈ ವೇಳೆ ಗಣೇಶ್ (42), ಉದಯ್ ಕುಮಾರ್ (43) ಎಂಬುವವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಗಣೇಶ್ ರಾಯಚೂರಿನ ನಿಜಲಿಂಗಪ್ಪ ಕಾಲೋನಿ ನಿವಾಸಿಯಾಗಿದ್ದರೆ, ಉದಯ್ ಕೆಇಬಿ ಕಾಲೋನಿ ನಿವಾಸಿ.

ಗಣೇಶ್ ಶವ ಪತ್ತೆಯಾಗಿದ್ದು, ಉದಯ್ ಶವಕ್ಕಾಗಿ ಶೋಧ ನಡೆದಿದೆ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋವಿಡ್ ಲಸಿಕೆ ಪಡೆಯುತ್ತಿದ್ದಂತೆ ಎದ್ದು ಓಡಾಡಿದ 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ

Home add -Advt

Related Articles

Back to top button