*BREAKING: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ರೈಲಿಗೆ ತಲೆಕೊಟ್ಟು ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ರೈಲ್ವೆ ನಿಲ್ದಾಣದಲ್ಲಿ ಈ ದುರಂತ ನಡೆದಿದೆ. 21 ವರ್ಷದ ಸುಮಂಗಲ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಸುಮಂಗಲ ಬಿಎಸ್ ಸಿ ಓದುತ್ತಿದ್ದಳು. ಇಂದು ಬೆಳಿಗ್ಗೆ ರೈಲು ನಿಲ್ದಾಣಕ್ಕೆ ಬಂದವಳು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Home add … Continue reading *BREAKING: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ*