Latest

ನೋಡ ನೋಡುತ್ತಿದ್ದಂತೆ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಅರ್ಚಕ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ರಾಜ್ಯದಲ್ಲಿ ವರುಣಾರ್ಭಟಕ್ಕೆ ನದಿ, ಜಲಾಶಯಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಮಹಾಮಳೆ ಅಬ್ಬರಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ತುಂಗಭದ್ರಾ ನದಿಯ ಪ್ರವಾಹಕ್ಕೆ ಅರ್ಚಕರೊಬ್ಬರು ಕೊಚ್ಚಿ ಹೋದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ತುಂಗಭದ್ರಾ ನದಿ ದಡದಲ್ಲಿರುವ ಕರಿವೀರೇಶ್ವರ ದೇವಸ್ಥಾನದ ಅರ್ಚಕರು ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.

ಲಿಂಗಪ್ಪ ಪೂಜಾರ (52) ನೀರು ಪಾಲಾದ ಅರ್ಚಕರು. ಕರಿವೀರೇಶ್ವರ ದೇವಸ್ಥಾನಕ್ಕೆ ಪೂಜೆಗೆಂದು ಬಂದ ಅರ್ಚಕರು ಸ್ನಾನಕ್ಕೆಂದು ತುಂಗಭದ್ರಾ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಅರ್ಚಕರು ಕೊಚ್ಚಿ ಹೋಗಿದ್ದಾರೆ.

ಸ್ಥಳಕ್ಕೆ ಸಿಂಧನೂರು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ನದಿಯಲ್ಲಿ ಅರ್ಚಕರಿಗಾಗಿ ಶೋಧ ನಡೆಸಿದ್ದಾರೆ.
ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button