Karnataka NewsLatestPolitics

*ಕಾಂಗ್ರೆಸ್ ನಿಂದ ಎಂಎಲ್ ಸಿ ಅಬ್ದುಲ್ ಜಬ್ಬಾರ್ ಅಮಾನತು*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಉಪಚುನಾವಣೆ ಮುಗಿದರೂ ಅಲ್ಪಸಂಖ್ಯಾತರ ಅಸಮಾಧನಕ್ಕೆ ಕಾರಣರಾದ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕೆ ಕಾಂಗ್ರೆಸ್​​​​​​ ಮೂವರು ಮುಸ್ಲಿಂ ನಾಯಕರಲ್ಲಿ ಇಬ್ಬರ ತಲೆದಂಡವಾಗಿದೆ.

ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್​​ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿತ್ತು. ಬಳಿಕ ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಇದೀಗ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಮಾನತುಗೊಳಿಸಲಾಗಿದೆ.

Home add -Advt

ಅಬ್ದುಲ್ ಜಬ್ಬಾರ್​​ ಅವರನ್ನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಅಧ್ಯಕ್ಷ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರದಿಸಿದ್ದಾರೆ.

ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾಗಿ ಸ್ವತಃ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಅವರು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಬಂಡಾಯಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.


Related Articles

Back to top button