Belagavi NewsBelgaum NewsKannada NewsKarnataka NewsLife StyleNational

*ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ: ಯೆಲ್ಲೋ ಅಲರ್ಟ್ ಘೋಷಣೆ* 

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆಯ ಅಕಾಲಿಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿ ಮುನ್ಸೂಚನೆ ನೀಡಿದೆ. 

ಬೆಳಗಾವಿ ಸೇರಿದಂತೆ 12ಕ್ಕೂ ಹೆಚ್ಚು  ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆಯಾಗಿ ಅವಾಂತರ ಸೃಷ್ಟಿಯಾಗಿದೆ.

Related Articles

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಉತ್ತರ ಕನ್ನಡ, ಬೀದರ್, ಧಾರವಾಡ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಂಭವವಿದೆ.

ಹಾಸನ, ತುಮಕೂರು, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

Home add -Advt

ಮೇ. 6 ರಿಂದ ಅಕಾಲಿಕ ಮಳೆ ಮುಂದುವರೆಯುವ ಸಂಭವವಿದ್ದು ತರಕಾರಿ ಹಾಗೂ ಹಣ್ಣು ಬೆಳೆಗಾರರು ಅಕಾಲಿಕ ಮಳೆಯಿಂದ ನಷ್ಟಕ್ಕೀಡಾಗಿದ್ದಾರೆ.

Related Articles

Back to top button