ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿಶ್ವವಾಣಿ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರನ ದಾಂಧಲೆ ಕುರಿತು ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ 8 ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಪ್ರಗತಿವಾಹಿನಿ ತೀವ್ರವಾಗಿ ಖಂಡಿಸುತ್ತದೆ.
ಇದು ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನವಾಗಿದ್ದು, ತುರ್ತು ಪರಿಸ್ಥಿತಿಯನ್ನು ನೆಪಿಸುವಂತಿದೆ. ಸರಕಾರ ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಹಾಕಿರುವ ಪ್ರಕರಣವನ್ನು ವಾಪಸ್ ಪಡೆಬೇಕು ಎಂದು ಪ್ರಗತಿವಾಹಿನಿ ಆಗ್ರಹಿಸುತ್ತದೆ.