Kannada NewsLatest

ಬೆಳಗಾವಿಯಲ್ಲಿಯೂ ವರುಣನ ಸಿಂಚನ; ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಸಿಲ ಝಳದಿಂದ ಬಸವಳಿದಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದು, ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಧಾರವಾಡದ ಕಲಘಟಗಿ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಚಿಕ್ಕಮಗಳೂರಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಬಿರಿ ಬೇಸಿಗೆಯಿಂದ ಕಂಗಾಲಾಗಿದ್ದ ಕಾಫಿ ನಾಡ ಜನತೆ ಮೊಗದಲ್ಲಿ ಸಂತಸ ಅರಳಿದೆ.

ಇನ್ನು ಬೆಳಗಾವಿ ಜಿಲ್ಲೆಯಲ್ಲಿಯೂ ಸಾಧಾರಣ ಮಳೆಯಾಗುತ್ತಿದ್ದು, ಬಿಸಿಲ ಝಳಕ್ಕೆ ಕಾದ ಕಾವಲಿಯಂತಾಗಿದ್ದ ಬೆಳಗಾವಿ ನಗರದ ಮೇಲೆಯೂ ವರುಣ ತಂಪೆರೆದಿದ್ದಾನೆ.

Home add -Advt

ರಾಜ್ಯದ ಹಲವು ಇಜಿಲ್ಲೆಗಳಲ್ಲಿ ಇನ್ನೂ ನಾಲ್ಕುದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button