Kannada NewsKarnataka NewsLatestPolitics

*ರಾಜ್ಯಸಭಾ ಚುನಾವಣೆ: 5ನೇ ಅಭ್ಯರ್ಥಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಬಿಜೆಪಿ-ಜೆಡಿಎಸ್ ಯೋಜನೆ ರೂಪಿಸಿದ್ದು, ಕೊನೇಕ್ಷಣದಲ್ಲಿ ಮಾಜಿ ರಾಜಸಭಾ ಸದಸ್ಯ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದೆ.

ರಾಜ್ಯಸಭಾ ಚುನವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಬಿಜೆಪಿ ಸಲಹೆ ಮೇರೆಗೆ ಈ ನಿರ್ಧರ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ.

ರಾಜ್ಯ ನಾಯಕರ ಸಲಹೆಯಂತೆ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದದರೆ. ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ. ವಿಪಕ್ಷದ ಮತಗಳು ನಷ್ಟವಾಗಬಾರದು. ಹೆಚ್ಚುವರಿ ಮತಗಳು ಕುಪೇಂದ್ರ ರೆಡ್ಡಿಗೆ ವರ್ಗಾವಣೆ ಮಾಡಬೇಕು ಎಂದು ತೀರ್ಮಾನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button