Belagavi NewsBelgaum NewsKannada NewsKarnataka News

ರಕ್ಕಸಕೊಪ್ಪ ಜಲಾಶಯ ಭರ್ತಿ: ನದಿಗೆ ನೀರು ಬಿಡುಗಡೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಮೂಲಗಳಲ್ಲಿ ಒಂದಾದ ರಕ್ಕಸಕೊಪ್ಪ ಜಲಾಶಯವು ಭರ್ತಿಯಾಗಿದೆ.

ಈ ಹಿನ್ನಲೆಯಲ್ಲಿ, ಬೆಳಗಾವಿ ನಗರದ ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿಯವರು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ, ಎರಡು ಗೇಟಗಳನ್ನು ಎರಡು ಇಂಚು ತೆರೆಯುವ ಮೂಲಕ ಮಾರ್ಕಂಡೇಯ ನದಿಗೆ ನೀರನ್ನು ಹರಿಸಲು ತಾಂತ್ರಿಕ ಅಭಿಪ್ರಾಯದೊಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕೆ ಯು ಐ ಡಿ ಎಫ್ ಸಿ ಕಾರ್ಯಪಾಲಕ ಅಭಿಯಂತರುಗಳಾದ ಅಶೋಕ ಬುರಕುಲೆ, ಸಾಲಿಮಠ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಶಿಕುಮಾರ ಹತ್ತಿ, ಎಲ್ &ಟಿ ಮತ್ತು ಸ್ಮೆಕ್ ಕನ್ಸಲ್ಟಂಟ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button