Kannada NewsKarnataka NewsLatest

*ಅಪ್ರಾಪ್ತೆಗೆ ಚಾಕು ಇರಿದು ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಹಾಡ ಹಗಲೇ ಕಾಲೇಜು ಬಳಿ ಅಪ್ರಾಪ್ತೆಗೆ ಚಾಕು ಇರಿದು ಆಕೆಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಇನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪ್ರಾಪ್ತ ಯುವತಿಗೆ ಚಾಕು ಇರಿದು ಹಲ್ಲೆ ಮಾಡಿದ್ದಾರೆ. ಬಳಿಕ ಆಕೆಯನ್ನು ಅಪಹರಿಸಿದ್ದಾರೆ.

ಸ್ಥಳೀಯರು ಅಪಹರಣವನ್ನು ತಪ್ಪಿಸಲು ಯತ್ನಿಸಿದ್ದಾರೆ ಆದರೂ ಸಾಧ್ಯವಾಗಿಲ್ಲ. ಯುವತಿಗೆ ಚಾಕು ಇರಿದಿದ್ದರಿಂದ ರಕ್ತ ಸುರಿಯುತ್ತಿದ್ದರೂ ದುಷ್ಕರ್ಮಿಗಳು ಆಕೆಯನ್ನು ಕಾರಿನಲ್ಲಿ ಎಳೆದೊಯ್ದಿದ್ದಾರೆ. ಸ್ಥಳೀಯರು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ತಡೆಯಲು ಯತ್ನಿಸಿದ್ದಾರೆ. ಆದರೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಪಹರಣಕಾರರನ್ನು ಪೊಲೀಸರು ಬೆನ್ನಟ್ಟಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button