Latest

*ಮಗನಿಗಾಗಿ ಕ್ಷೇತ್ರ ತ್ಯಾಗ*

ಪ್ರಗತಿವಾಹಿನಿ ಸುದ್ದಿ; ರಾಮನಗರ: 2023ರ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಲಿದ್ದಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ತಮ್ಮಕ್ಷೇತ್ರವನ್ನು ಮಗನಿಗಾಗಿ ತ್ಯಾಗ ಮಾಡಿದ್ದಾರೆ.

ರಾಮನಗರದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅನಿತಾ ಕುಮಾರಸ್ವಾಮಿ, ಮುಂಬರುವ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಲಿದ್ದಾನೆ. ಎಲ್ಲರ ಆಶೀರ್ವಾದ ನಿಖಿಲ್ ಮೇಲಿರಲಿ. ನನ್ನ ಬಗ್ಗೆ ಕೆಲ ಅಪಪ್ರಾಚಾರ ಮಾಡುತ್ತಿದ್ದರು. ಹಾಗಾಗಿ ಇಂದೇ ಈ ಎಲ್ಲದಕ್ಕೂ ಫೈನಲ್ ಮಾಡಬೇಕು ಎಂದು ಹೇಳುತ್ತಿದ್ದೇನೆ. ನಿಖಿಲ್ ರಾಮನಗರದಿಂದ ಸ್ಪರ್ಧಿಸಲಿದ್ದಾನೆ. ನಾನು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತೇನೆ. ದೇವರ ಮುಂದೆ ನಿಂತಾಗ ನನ್ನ ಗಂಡ ಹಾಗೂ ಮಗನಿಗೆ ಒಳ್ಳೆಯದಾಗಲಿ ಎಂದೇ ಕೇಳುವುದು ಎಂದು ಹೇಳುತ್ತಾ ಭಾವುಕರಾದರು.

ಈ ಹಿಂದೆ ಮುಂಬರುವ ಚುನಾವಣೆಯಲ್ಲಿ ಅನಿತಾ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ರಾಮನಗರದಿಂದ ಜೆಡಿಎಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಸ್ವತ: ಅನಿತಾ ಕುಮಾರಸ್ವಾಮಿ, ನಿಖಿಲ್ ಸ್ಪರ್ಧೆಯನ್ನು ಘೋಷಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

*ಮತ್ತೆ ಬೆಳಗಾವಿಗೆ ಬರುವುದಾಗಿ ಹೇಳಿಕೆ ನೀಡಿದ ಮಹಾರಾಷ್ಟ್ರ ಸಚಿವ*

https://pragati.taskdun.com/messhambhuraj-deasibelagavivisit/

*PFI ರೀತಿ ಕಾಂಗ್ರೆಸ್ ನ್ನು ಬ್ಯಾನ್ ಮಾಡುವ ಸ್ಥಿತಿ ಬರಲಿದೆ ಎಂದ ಈಶ್ವರಪ್ಪ*

https://pragati.taskdun.com/k-s-eshwarappad-k-shivakumarpficongress/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button