LatestUncategorized

*ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದರೂ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತಿ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಈ ವಿಷಯ ತಿಳಿಸಿದ ರಮಾನಾಥ್ ರೈ, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ. ಆದರೆ ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ. ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ರಾಜ್ಯದ ಜನರು ಮತ ಕೊಟ್ಟಿದ್ದಾರೆ ಎಂದು ಹೇಳಿದರು.

Related Articles

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಾಗಿದೆ. ನನ್ನ ಸೋಲಿನ ಅವಲೋಕನ ಮಾಡಿದ್ದೇನೆ ಎಂದರು. ಇನ್ನು ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ನೂತನ ಸಿಎಂ ಪ್ರಮಾಣವಚನ ಸ್ವೀಕಾರದ ಬಳಿಕ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತವೆ ಎಂದು ಹೇಳಿದರು.

https://pragati.taskdun.com/d-k-shivakumarreactioncm-post/

Home add -Advt

Related Articles

Back to top button